4:17 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬದಲಾವಣೆ: ಯಡಿಯೂರಪ್ಪ ಜತೆಗೆ ಶೆಟ್ಟರ್, ಈಶ್ವರಪ್ಪ ಅವರಿಗೂ ಕೊಕ್; ನಳಿನ್  ಸ್ಫೋಟಕ ಆಡಿಯೋ ಬಹಿರಂಗ

19/07/2021, 07:57

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಜತೆಗೆ ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ಹಾಗೂ ಈಶ್ವರಪ್ಪ ಅವರಿಗೂ ಸಂಪುಟದಿಂದ ಖಾಯಂ ಆಗಿ ಹೊರಗಿಡುವ ಮಾಹಿತಿ ಲಭಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದು ಎನ್ನಲಾದ ಆಡಿಯೋ ಮೂಲಕ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇದರೊಂದಿಗೆ ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಮೂಡಿದೆ.

ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಪ್ತರ ಜತೆ ತುಳು ಭಾಷೆಯಲ್ಲಿ ನಡೆಸಿದ ಸಂಭಾಷಣೆಯ ತುಣುಕು ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ನಳಿನ್‌ ಅವರು ತುಳುವಿನಲ್ಲಿ ಸಂಭಾಷಣೆ ನಡೆಸುತ್ತಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದ್ದಾರಲ್ಲದೆ ಶೆಟ್ಟರ್, ಈಶ್ವರಪ್ಪ ಅವರನ್ನು ಕೈಬಿಡುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಜಾಗಕ್ಕೆ ಮೂವರ ಪೈಕಿ ಒಬ್ಬರು ಬರಲಿದ್ದಾರೆ ಎಂದು ನಳಿನ್‌  ಸುಳಿವು ನೀಡಿದ್ದಾರೆ.

ಯಾರಿಗೂ ಹೇಳಬೇಡ ಎಂದು ತುಳು ಭಾಷೆಯಲ್ಲಿ ಹೇಳುತ್ತಾ, ನಂತರ ನಾವು ಹೇಳಿದಂತೆಯೇ ನಡೆಯಲಿದೆ. ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್‌ ಗಮನದಲ್ಲಿದೆ ಎಂದು ನಳಿನ್ ಮಾಹಿಯನ್ನು ತನ್ನ ಆಪ್ತರು ಜತೆ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು