11:05 AM Wednesday27 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ: ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ 

30/05/2022, 22:15

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 1ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 31ರ ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.30ಕ್ಕೆ ಬಜ್ಪೆಯಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಮಣಿಪಾಲ್‍ಗೆ ತೆರಳಿ ವಾಸ್ತವ್ಯ ಮಾಡುವರು. 

ಜೂ.1ರ ಮಧ್ಯಾಹ್ನ 1.30ಕ್ಕೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಿಂದ ರಸ್ತೆ ಮೂಲಕ ಹೊರಟು 2.30ಕ್ಕೆ ಮೂಡುಬಿದರೆಗೆ ಆಗಮಿಸುವರು. 3 ಗಂಟೆಗೆ ಆಳ್ವಾಸ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿರುವ ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. 

ಸಂಜೆ 5 ಗಂಟೆಗೆ ಮೂಡುಬಿದಿರೆಯಿಂದ ಹೊರಟು 6 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.50ಕ್ಕೆ ವಿಮಾನದ ಮೂಲಕ ಹೊರಟು 7.40ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು