10:05 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಪ್ರತಿಕೃತಿಗೆ ಚಪ್ಪಲಿಯೇಟು, ಬೆಂಕಿ: ಶಾಸಕ ಯಶ್ ಪಾಲ್ ಸಹಿತ 11 ಮಂದಿ ವಿರುದ್ಧ ಎಫ್‌ಐಆರ್

09/09/2024, 23:07

ಉಡುಪಿ(reporterkarnataka.com): ಮುಖ್ಯಮಂತ್ರಿಯ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ದಹಿಸಿದ ಪ್ರಕರಣ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಿಕ್ಷಕರೊಬ್ಬರಿಗೆ ನೀಡಲಾದ ಪ್ರಶಸ್ತಿಯನ್ನು ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ವೃತ್ತದಲ್ಲಿ ಸೆ.6 ರಂದು ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ಬೆಂಕಿ ಹಚ್ಚಲಾಗಿತ್ತು.
ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು.
ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಎನ್‌ಎಸ್ ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್ ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು