3:48 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಕುರಿತು ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ: ಧರ್ಮಸ್ಥಳಕ್ಕೆ ಬರಲು ಸಿಎಂಗೆ ಆಹ್ವಾನ

14/07/2023, 21:40

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ರಾಜ್ಯಸಭೆ ಸದಸ್ಯ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ. ಹೆಗ್ಗಡೆ ಅವರು, ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಸೇವೆ ಹಾಗೂ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅವಕಾಶ ಸಿಕ್ಕಿದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ ವ್ಯಕ್ತಪಡಿಸಿರುವ ಡಾ. ಹೆಗ್ಗಡೆ ಅವರು, ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸುತ್ತಿರುವುದು ಇಡೀ ಜೈನ ಸಮುದಾಯಕ್ಕೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು