12:01 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ

02/06/2023, 16:23

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ‌ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ.
ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕದಲ್ಲಿ ರಾಜ್ಯದ ಪ್ರಮುಖ ನಾಯಕರುಗಳಲ್ಲಿ ಒಬ್ಬರಾಗಿದ್ದರು. ಜನಸಂಘ ಮೂಲದಿಂದ ರಾಜಕೀಯ ಪ್ರವೇಶಿಸಿದ ಸುಬ್ಬಯ್ಯ ಅವರು ಅಂದು ಆಡಳಿತ ಪಕ್ಷದ ರೋಲೆಕ್ಸ್ ವಾಚ್ ಹಗರಣದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಿದ್ದರು.
ಜನಸಂಘ ಹಾಗೂ ಬಿಜೆಪಿಯಲ್ಲಿ ಗರ್ಭಗುಡಿ ಸಂಸ್ಕೃತಿ ಇದೆ ಎಂದು ಆರೋಪಿಸಿ ಪಕ್ಷದಿಂದ ಹೊರಗೆ ಬಂದು ತನ್ನದೇ ಆದ ಕನ್ನಡ ನಾಡು ಪಕ್ಷ ಕಟ್ಟಿದ್ದರು. ಬಿಜೆಪಿ ಹಾಗೂ ಸಂಘ ಪರಿವಾರದ ಕಟು ಟೀಕೆಕಾರರಾಗಿದ್ದರು. ನೇರ ನಡೆ ನುಡಿಗೆ ಸುಬ್ಬಯ್ಯ ಅವರು ಖ್ಯಾತರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು