9:49 AM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ

02/06/2023, 16:23

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ‌ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ.
ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕದಲ್ಲಿ ರಾಜ್ಯದ ಪ್ರಮುಖ ನಾಯಕರುಗಳಲ್ಲಿ ಒಬ್ಬರಾಗಿದ್ದರು. ಜನಸಂಘ ಮೂಲದಿಂದ ರಾಜಕೀಯ ಪ್ರವೇಶಿಸಿದ ಸುಬ್ಬಯ್ಯ ಅವರು ಅಂದು ಆಡಳಿತ ಪಕ್ಷದ ರೋಲೆಕ್ಸ್ ವಾಚ್ ಹಗರಣದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಿದ್ದರು.
ಜನಸಂಘ ಹಾಗೂ ಬಿಜೆಪಿಯಲ್ಲಿ ಗರ್ಭಗುಡಿ ಸಂಸ್ಕೃತಿ ಇದೆ ಎಂದು ಆರೋಪಿಸಿ ಪಕ್ಷದಿಂದ ಹೊರಗೆ ಬಂದು ತನ್ನದೇ ಆದ ಕನ್ನಡ ನಾಡು ಪಕ್ಷ ಕಟ್ಟಿದ್ದರು. ಬಿಜೆಪಿ ಹಾಗೂ ಸಂಘ ಪರಿವಾರದ ಕಟು ಟೀಕೆಕಾರರಾಗಿದ್ದರು. ನೇರ ನಡೆ ನುಡಿಗೆ ಸುಬ್ಬಯ್ಯ ಅವರು ಖ್ಯಾತರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು