3:34 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ

02/06/2023, 16:23

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ‌ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ.
ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕದಲ್ಲಿ ರಾಜ್ಯದ ಪ್ರಮುಖ ನಾಯಕರುಗಳಲ್ಲಿ ಒಬ್ಬರಾಗಿದ್ದರು. ಜನಸಂಘ ಮೂಲದಿಂದ ರಾಜಕೀಯ ಪ್ರವೇಶಿಸಿದ ಸುಬ್ಬಯ್ಯ ಅವರು ಅಂದು ಆಡಳಿತ ಪಕ್ಷದ ರೋಲೆಕ್ಸ್ ವಾಚ್ ಹಗರಣದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಿದ್ದರು.
ಜನಸಂಘ ಹಾಗೂ ಬಿಜೆಪಿಯಲ್ಲಿ ಗರ್ಭಗುಡಿ ಸಂಸ್ಕೃತಿ ಇದೆ ಎಂದು ಆರೋಪಿಸಿ ಪಕ್ಷದಿಂದ ಹೊರಗೆ ಬಂದು ತನ್ನದೇ ಆದ ಕನ್ನಡ ನಾಡು ಪಕ್ಷ ಕಟ್ಟಿದ್ದರು. ಬಿಜೆಪಿ ಹಾಗೂ ಸಂಘ ಪರಿವಾರದ ಕಟು ಟೀಕೆಕಾರರಾಗಿದ್ದರು. ನೇರ ನಡೆ ನುಡಿಗೆ ಸುಬ್ಬಯ್ಯ ಅವರು ಖ್ಯಾತರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು