8:56 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಪೊಳಲಿ ರಾಜ ರಾಜೇಶ್ವರಿ ದೇಗುಲಕ್ಕೆ ಭೇಟಿ: ಮಂಗಳೂರಿನಲ್ಲಿ ವಾಸ್ತವ್ಯ

11/04/2022, 21:29

ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 12ರ ಮಂಗಳವಾರ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು

ಬೊಮ್ಮಾಯಿ ಅವರು 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು.

12ರಂದು ಬೆಳಿಗ್ಗೆ ಉಡುಪಿಯ ಮಣಿಪಾಲ್‍ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು.

ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯ ವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ

ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. 8.45ಕ್ಕೆ ಅಲ್ಲಿಂದ ಹಿಂತಿರುಗಿ ರಾತ್ರಿ 9.15ಕ್ಕೆ ಮಂಗಳೂರಿಗೆ ಆಗಮಿಸಿ, ನಗರದಲ್ಲಿ ವಾಸ್ತವ್ಯ ಮಾಡುವರು.

ಏ.13ರ ಬುಧವಾರ ಬೆಳಿಗ್ಗೆ 8.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಬಂಟ್ವಾಳದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ 1.05ಕ್ಕೆ ಬಜಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 1.40ಕ್ಕೆ ವಿಮಾನದ ಮೂಲಕ ಹೊರಟು ಮಧ್ಯಾಹ್ನ 2.35ಕ್ಕೆ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು