9:55 PM Friday1 - August 2025
ಬ್ರೇಕಿಂಗ್ ನ್ಯೂಸ್
ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ

ಇತ್ತೀಚಿನ ಸುದ್ದಿ

ಮುಳಬಾಗಿಲು ಅಂಜನಾದ್ರಿ ಬೆಟ್ಟದಲ್ಲಿ ಬೆಚ್ಚಿಬೀಳಿಸುವ ಘಟನೆ: ಹೆತ್ತಬ್ಬೆಯಿಂದಲೇ ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ; ಓರ್ವ ಬಾಲಕಿ ಸಾವು

08/12/2022, 10:33

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಮಕ್ಕಳಿಗೆ ತಾಯಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ತಡರಾತ್ರಿ ನಡೆದಿದ್ದು , ಓರ್ವ ಪುತ್ರಿ ಸುಟ್ಟು ಕರಕಲಾಗಿದ್ದು , ಮತ್ತೊಬ್ಬ ಮಗಳ ಸ್ಥಿತಿ ಚಿಂತಾಜನಕವಾಗಿದೆ .

ಓರ್ವ ಮಗಳು ಅಕ್ಷಯ ( ೮ ) ಸ್ಥಳದಲ್ಲೇ ಮೃತಪಟ್ಟಿದ್ದು , ಮತ್ತೊಬ್ಬ ಮಗಳು ಉದಯಶ್ರೀ ( ೬ ) ಸಾವು ಬದುಕಿನ ನಡುವೆ ಹೋರಾಡುತ್ತಿದ್ದು , ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬುಧವಾರ ಮುಂಜಾನೆ ವಾಯುವಿಹಾರಕ್ಕೆಂದು ತೆರಳಿದವರು ಅಂಜನಾದ್ರಿ ಬೆಟ್ಟದ ಬಳಿ ಜನ ಹೋದಾಗ ಚೀರಾಡುವ ಶಬ್ದ ಕೇಳಿಸಿದ್ದು , ಸಮೀಪಕ್ಕೆ ಹೋದಾಗ ಸುಟ್ಟ ಗಾಯಗಳಿಂದ ಓರ್ವ ಬಾಲಕಿ ನರಳಾಡುತ್ತ ರೋಧಿಸುತ್ತಿರುವ ಮತ್ತು ಮತ್ತೊಬ್ಬ ಬಾಲಕಿಯ ಸುಟ್ಟು ಕರಕಲಾದ ಶವ ಕಂಡು ಬಂದಿದೆ . ಈ ದೃಶ್ಯ ಕಂಡ ಬೆಚ್ಚಿಬಿದ್ದ ಸ್ಥಳೀಯರು ತಕ್ಷಣ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು , ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಾಯಿಯನ್ನು ವಶಕ್ಕೆ ಪಡೆದು ನರಳಾಡುತ್ತಿದ್ದ ಬಾಲಕಿಯನ್ನು ಪಿಎಸ್‌ಐ ಮಂಜುನಾಥ್ ಬೆಟ್ಟದಿಂದ ಎತ್ತಿಕೊಂಡೇ ಓಡಿ ಬಂದು ಆಸ್ಪತ್ರೆಗೆ ದಾಖಲಿಸಿದ ದೃಶ್ಯ ಹೃದಯ ಕಲುಕುವಂತಿತ್ತು .


ಮಕ್ಕಳಿಗೆ ಬೆಂಕಿ ಹಚ್ಚಿದ ತಾಯಿಯ ಹೆಸರು ಜ್ಯೋತಿ , ಈಕೆ ಆಂಧ್ರ ಪ್ರದೇಶದ ಪಲಮನೇನು ಬಳಿಯ ಬುಸಾನಿ ಕುರುಪಲ್ಲಿ ನಿವಾಸಿಯಾಗಿದ್ದು ,ಈಕೆ ಆಂಧ್ರದ ತಿರುಮೇಶ್ ಎಂಬಾತನನ್ನು ಮದುವೆಯಾಗಿದ್ದರು . ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು , ಕೌಟುಂಬಿಕ ಕಲಹದಿಂದ ಮನನೊಂದ ಜ್ಯೋತಿ ತನ್ನಿಬ್ಬರು ಮಕ್ಕಳೊಂದಿಗೆ ಮುಳಬಾಗಿಲಿಗೆ ಮಂಗಳವಾರ ಆಗಮಿಸಿದ್ದು , ಆತ್ಮಹತ್ಯೆಗೆ ನಿರ್ಧರಿಸಿ ಪೆಟ್ರೋಲ್ ತೆಗೆದುಕೊಂಡು ಹೋಗಿದ್ದಾಳೆ . ಮೊದಲು ಮಕ್ಕಳನ್ನು ಕೊಂದು ನಂತರ ತಾನು ಸಾಯಲು ನಿರ್ಧರಿಸಿದ್ದು , ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿದ್ದಾಳೆ ಎನ್ನಲಾಗಿದೆ . ಮಕ್ಕಳ ಚೀರಾಟ ನೋಡಿ ಕಣ್ಣೀರು ಸುರಿಸುತ್ತಾ ಪಕ್ಕದಲ್ಲೇ ಕುಳಿತಿದ್ದಾಳೆ . ಘಟನೆ ರಾತ್ರಿ ನಡೆದಿದ್ದರಿಂದ ಸಾರ್ವಜನಿಕರಿಗೆ ವಿಷಯ ಗೊತ್ತಾಗಿಲ್ಲ , ಮುಳಬಾಗಿಲು ಪೊಲೀಸರು ಪ್ರಕರಣ ದಾಖಲಿಸಿದ್ದು , ತಾಯಿ ಜ್ಯೋತಿಯನ್ನು ಬಂಧಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು