9:38 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನ: ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ. ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗ

07/12/2024, 21:24

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ ಅನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸುವ ಕಾರ್ಯಕ್ಕೆ ಮುಂದಾಗಿದೆ.
ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರಾದ ದಿ. ಮುಳಿಯ ಕೇಶವ ಭಟ್ಟ ಅವರು ಜನಿಸಿ 127 ವರ್ಷಗಳಾಗಿದ್ದು, ಇದರ ಅಂಗವಾಗಿ ಮುಳಿಯರ – ಅಳಿಯದ ನೆನಪು ಕಾರ್ಯಕ್ರಮವನ್ನು ಡಿ.7,8 ಮತ್ತು 9ರಂದು ಹಾಕಿಕೊಳ್ಳಲಾಗಿದೆ. ಇದರ ಅಂಗವಾಗಿ ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಹೆಚ್ಚುವರಿ ಶುಲ್ಕವನ್ನು ವಿಧಿಸದೆ, ಅವರು ಖರೀದಿಸುವ ಚಿನ್ನದ ಗ್ರಾಂ ಲೆಕ್ಕದಲ್ಲಿ 50 ರೂ ವನ್ನು ವಿವಿಧ ಸಾಮಾಜಿಕ ಚಟುವಟಿಕೆಗೆ ಬಳಸುವುದಕ್ಕೆ ಮುಂದಾಗಿದೆ.
ಗುಣಮಟ್ಟದ ಚಿನ್ನಾಭರಣಕ್ಕೆ ಹೆಸರುವಾಸಿಯಾದ ಮುಳಿಯ ಈಗಾಗಲೇ ವಿವಿಧ ಸಾಮಾಜಿಕ ಚಟುವಟಿಕೆಯನ್ನು ನಡೆಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ಹಲವಾರು ವರ್ಷಗಳಿಂದ ಇದನ್ನು ಹಾಕಿಕೊಂಡಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಈಗ ಯೋಜನೆಯನ್ನು ಹಮ್ಮಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು