7:35 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮುಳಿಯ ಜ್ಯುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ

23/06/2024, 19:28

ಪುತ್ತೂರು(reporterkarnataka.com): ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹತ್ವವಿದೆ ಎಂಬುದು ತಿಳಿಯುತ್ತದೆ ಎಂದು ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು.

ಶನಿವಾರ ಪುತ್ತೂರು ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಅಪ್ಪಂದಿರ ದಿನದ ಅಂಗವಾಗಿ ಚಿನ್ನದಂತ ಅಪ್ಪ ನನ್ನ ಅಪ್ಪ ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಂದೆಯವರು ಸಂಸ್ಥೆ ನಡೆಸುವ ಸಮಯದಲ್ಲಿ ೯೧೬ ಚಿನ್ನಾಭರಣ ಎಂಬ ವ್ಯವಸ್ಥೆ ಇಲ್ಲದಿದ್ದರೂ, ಅವರ ಕಾಲದಲ್ಲಿ ನೀಡಿದ ಚಿನ್ನಾಭರಣಗಳು ಅದೇ ಗುಣಮಟ್ಟದಲ್ಲಿತ್ತು. ಆ ಪ್ಯೂರಿಟಿಯನ್ನು ಅಂದು ಗ್ರಾಹಕರಿಗೆ ನೀಡಿದ ಕಾರಣದಿಂದ ಇಂದಿಗೂ ಮುಳಿಯದ ಹೆಸರು ಉತ್ತಮವಾಗಿ ಉಳಿದುಕೊಂಡಿದೆ. ಸಂಸ್ಥೆಯ ಬೆಳವಣಿಗೆಯಲ್ಲೂ ಇದು ಮಹತ್ವದ ಪಾತ್ರವನ್ನು ವಹಿಸಿದೆ ಎಂದು ತಿಳಿಸಿದರು.
ಚಿನ್ನದಂತ ಅಪ್ಪ ನನ್ನ ಅಪ್ಪ ವಿನೂತನ ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯ ಹಿರಿಯರಾದ ಶ್ಯಾಮ್ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಿಲ್ವರ್ ಉತ್ಸವದ ಅಂಗವಾಗಿ ವಿವಿಧ ವಿನ್ಯಾಸದ ಆಭರಣಗಳನ್ನು ಬಿಡುಗಡೆ ಮಾಡಲಾಯಿತು.
ಗ್ರಾಹಕರಾದ ರವಿ ಕುಮಾರ್ ಮಾತನಾಡಿ, ಹಿರಿಯರ ಕಾಲದಿಂದಲೂ ಮುಳಿಯದ ಗ್ರಾಹಕರಾಗಿದ್ದು, ಚಿನ್ನ ಎಂದರೆ ಮುಳಿಯ ಎಂದು ಹೆಸರುವಾಸಿಯಾಗಿದೆ. ಮುಳಿಯ ಸಂಸ್ಥೆ ವ್ಯಾಪಾರಕ್ಕೆ ಮಾತ್ರ ಸೀಮಿತವಾಗಿರದೆ, ಗ್ರಾಹಕರ ಸಂತೃಪ್ತಿಗೂ ಹೆಚ್ಚಿನ ಮಹತ್ವ ನೀಡುತ್ತಿರುವುದು ಕಾರ್ಯಕ್ರಮಗಳ ಮೂಲಕ ತಿಳಿಯುತ್ತದೆ ಎಂದರು.
ವಿಶೇಷ ರೀತಿಯ ಅನುಭಂದ ಕಾರ್ಯಕ್ರಮ, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳ ಕಾರ್ಯಕ್ರಮ ನಡೆಯಿತು. ಸಂಗೀತ ಮನೋರಂಜನೆಯನ್ನು ಗ್ರಾಹಕರಿಗೆ ನೀಡಲಾಯಿತು. ಗ್ರಾಹಕ ಇಸ್ಮಾಯಿಲ್ ನೆಲ್ಯಾಡಿ ಅಭಿಪ್ರಾಯಗಳನ್ನು ಹಂಚಿಕೊಂಡರು.
ಸಂಸ್ಥೆಯ ನಿರ್ದೇಶಕಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಮಾರುಕಟ್ಟೆ ಮುಖ್ಯಸ್ಥ ಸಂಜೀವ, ಪ್ಲೋರ್ ಮ್ಯಾನೇಜರ್ ಆನಂದ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಪ್ಲೋರ್ ಮ್ಯಾನೇಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಸೌರಭ ರಾವ್ ಸಹಕರಿಸಿದರು.
*ಏಕಕಾಲದಲ್ಲಿ ಕಾರ್ಯಕ್ರಮ:*
ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಶೋರೋಂ ನಲ್ಲಿ ಏಕಕಾಲದಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ವಿನೂತನ ಕಾರ್ಯಕ್ರಮ ನಡೆಯಿತು. ೨೦೦ಕ್ಕೂ ಅಧಿಕ ತಂದೆ ಮಗ, ಅಪ್ಪ ಮಗಳು ಜೋಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನರಂಜನಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು