12:22 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ 3 ಸಾವಿರಕ್ಕೂ ಅಧಿಕ ಗಿಡಗಳ ವಿತರಣೆ; ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ

06/06/2024, 11:42

ಪುತ್ತೂರು(reporterkarnataka.com): ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು.
ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು. ಎಲ್ಲಾ ಶೋರೂಮ್‌ಗಳಲ್ಲಿ ಸಾರ್ವಜನಿಕರಿಗೆ 3000ಕ್ಕೂ ಅಧಿಕ ಗಿಡಗಳನ್ನು ವಿತರಿಸಲಾಯಿತು.

ಮುಳಿಯ ಜ್ಯುವೆಲ್ಸ್ ಸಂಸ್ಥೆ ಕೇವಲ ಚಿನ್ನಾಭರಣಗಳ ಮಾರಾಟದಲ್ಲಿ ಮಾತ್ರ ತೊಡಗಿಸಿಕೊಂಡಿಲ್ಲ, ಬದಲಾಗಿ ಮುಳಿಯ ಫೌಂಡೇಶನ್, ಮುಳಿಯ ಪ್ರಾಪರ್ಟೀಸ್‌ನಂತಹ ಸಂಸ್ಥೆಗಳ ಮೂಲಕ ಸಾರ್ವಜನಿಕ ಕಾಳಜಿಯ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದು, ಈ ಕಾರ್ಯಕ್ರಮಗಳ ಸಾಲಿನಲ್ಲಿ ವೃಕ್ಷಾರೋಪಣವೂ ಸೇರಿದೆ.
ಮಾರುಕಟ್ಟೆ ಮುಖ್ಯಸ್ಥ ಸಂಜೀವ, ಪ್ಲೋರ್ ಮ್ಯಾನೇಜರ್ ಯತೀಶ್, ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು