6:54 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮುಲ್ಕಿ ಹರೀಶ್ ಸಾಲ್ಯಾನ್ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ, 10 ಸಾವಿರ ದಂಡ

05/03/2026, 21:32

ಮಂಗಳೂರು(reporterkarnataka.com): ಮುಲ್ಕಿ ಪೇಟೆಯ ಟೂರಿಸ್ಟ್ ಕಾರು ಪಾರ್ಕಿಂಗ್ ಬಳಿಯ ಉಲ್ಲಂಜೆ ಎಂಬಲ್ಲಿಯ ಹರೀಶ್ ಸಾಲ್ಯಾನ್ ಎಂಬವರನ್ನು ಕೊಲೆಗೈದ ಪ್ರಕರಣ ಸಂಬಂಧಿಸಿದಂತೆ ಆರೋಪಿ ಮುರುಗನ್ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
2023 ಮಾರ್ಚ್ 19ರಂದು ರಾತ್ರಿ ಸುಮಾರು 9-45 ಗಂಟೆಗೆ ಬಪ್ಪನಾಡು ಗ್ರಾಮದ ಮುಲ್ಕಿ ಪೇಟೆಯ ಟುರಿಸ್ಟ್ ಕಾರು ಪಾರ್ಕಿಂಗ್ ಬಳಿ ಉಲ್ಲಂಜೆ ಎಂಬಲ್ಲಿಯ ಆರೋಪಿ ಮುರುಗನ್ ಎಂಬಾತ ಹರೀಶ್ ಸಾಲ್ಯಾನ್(47)ಎಂಬವರನ್ನು ಹಣಕಾಸಿನ ದ್ವೇಷದಿಂದ ಕೆಂಪು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದಾಗಿ ಮುಲ್ಕಿ‌ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು‌ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರಾದ ಜಗದೀಶ್ ವಿ. ಎನ್ . ಅವರು ಆರೋಪಿ ಮುರುಗನ್ ಎಂಬಾತನಿಗೆ ಕಲಂ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು