9:12 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮುಲ್ಕಿ: ಯುವತಿಯ ಸ್ನಾನದ ದೃಶ್ಯ ಸೆರೆ ಹಿಡಿಯಲು ಬಾತ್ ರೂಮ್ ನಲ್ಲಿ ಮೊಬೈಲ್ ಇಟ್ಟ ಯುವಕನ ಬಂಧನ

05/08/2023, 11:19

ಮಂಗಳೂರು(reporterkarnataka.com): ಉಡುಪಿಯ ಕಾಲೇಜೊಂದರ ಲೇಡಿಸ್ ಟಾಯ್ಲೆಟ್ ನಲ್ಲಿ ಹುಡುಗಿಯರೇ ಮೊಬೈಲ್ ಚಿತ್ರೀಕರಣ ನಡೆಸಿದ್ದಾರೆ ಎನ್ನಲಾದ ಪ್ರಕರಣ ಜೀವಂತವಾಗಿರುವಾಗಲೇ ನೆರೆಯ ಮಂಗಳೂರಿನ ಹೊರವಲಯದಲ್ಲಿ ಯುವತಿಯ ಸ್ನಾನದ ದೃಶ್ಯವನ್ನು ಸೆರೆ ಹಿಡಿಯಲು ಯುವಕನೊಬ್ಬ ಮೊಬೈಲ್ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಬಂಧಿಸಲಾಗಿದೆ.
ನೆರೆಮನೆಯ ಯುವತಿಯ ಸ್ನಾನದ ವಿಡಿಯೋ ಮಾಡಲು ಯುವಕ ಬಾತ್ ರೂಮ್ ನಲ್ಲಿ ಮೊಬೈಲ್ ಇಟ್ಟಿದ್ದ. ಇದೀಗ ಯುವಕನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮುಲ್ಕಿಯ ಪಕ್ಷಿಕೆರೆಯ ಸುಮಂತ್ ಪೂಜಾರಿ (22) ಬಂಧಿತ ಯುವಕ. ಈತ ತನ್ನ ನೆರೆಮನೆಯ ಬಾತ್ ರೂಂ ನಲ್ಲಿ ಮೊಬೈಲ್ ಬಚ್ಚಿಟ್ಟಿದ್ದನು. ಈ ಕೃತ್ಯ ಎಸಗಿದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಸುಮಂತ್ ಪೂಜಾರಿ ವಿಡಿಯೋ ಗಾಗಿ ನೆರೆಮನೆಯ ಸ್ನಾನಗೃಹದಲ್ಲಿ ಮೊಬೈಲ್ ಇಟ್ಟಿದ್ದನು. ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋ ಗಾಗಿ ಈತ ಮೊಬೈಲ್ ಅಡಗಿಸಿ ಇಟ್ಟಿದ್ದನು.ಆದರೆ ಯುವತಿಯ ಬದಲಾಗಿ ಯುವತಿಯ ಅಣ್ಣ ಬಾತ್ ರೂಂ ಗೆ ಸ್ನಾನಕ್ಕಾಗಿ ಬಂದಿದ್ದನು.

ಬಾತ್ ರೂಂ ನಲ್ಲಿ ಮೊಬೈಲ್ ಇರುವುದನ್ನು ಯುವತಿಯ ಅಣ್ಣ ಗಮನಿಸಿದ್ದಾನೆ. ಈ ವೇಳೆ ಸುಮಂತ್ ಯುವತಿಯ ಅಣ್ಣನ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಮಂತ್ ವಿರುದ್ಧ ಯುವತಿಯ ಅಣ್ಣ ಪ್ರಜ್ವಲ್ ಮುಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಸುಮಂತ್ ಪೂಜಾರಿಯನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು