5:11 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮುಲ್ಕಿ: ಯುವತಿಯ ಸ್ನಾನದ ದೃಶ್ಯ ಸೆರೆ ಹಿಡಿಯಲು ಬಾತ್ ರೂಮ್ ನಲ್ಲಿ ಮೊಬೈಲ್ ಇಟ್ಟ ಯುವಕನ ಬಂಧನ

05/08/2023, 11:19

ಮಂಗಳೂರು(reporterkarnataka.com): ಉಡುಪಿಯ ಕಾಲೇಜೊಂದರ ಲೇಡಿಸ್ ಟಾಯ್ಲೆಟ್ ನಲ್ಲಿ ಹುಡುಗಿಯರೇ ಮೊಬೈಲ್ ಚಿತ್ರೀಕರಣ ನಡೆಸಿದ್ದಾರೆ ಎನ್ನಲಾದ ಪ್ರಕರಣ ಜೀವಂತವಾಗಿರುವಾಗಲೇ ನೆರೆಯ ಮಂಗಳೂರಿನ ಹೊರವಲಯದಲ್ಲಿ ಯುವತಿಯ ಸ್ನಾನದ ದೃಶ್ಯವನ್ನು ಸೆರೆ ಹಿಡಿಯಲು ಯುವಕನೊಬ್ಬ ಮೊಬೈಲ್ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಬಂಧಿಸಲಾಗಿದೆ.
ನೆರೆಮನೆಯ ಯುವತಿಯ ಸ್ನಾನದ ವಿಡಿಯೋ ಮಾಡಲು ಯುವಕ ಬಾತ್ ರೂಮ್ ನಲ್ಲಿ ಮೊಬೈಲ್ ಇಟ್ಟಿದ್ದ. ಇದೀಗ ಯುವಕನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮುಲ್ಕಿಯ ಪಕ್ಷಿಕೆರೆಯ ಸುಮಂತ್ ಪೂಜಾರಿ (22) ಬಂಧಿತ ಯುವಕ. ಈತ ತನ್ನ ನೆರೆಮನೆಯ ಬಾತ್ ರೂಂ ನಲ್ಲಿ ಮೊಬೈಲ್ ಬಚ್ಚಿಟ್ಟಿದ್ದನು. ಈ ಕೃತ್ಯ ಎಸಗಿದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಸುಮಂತ್ ಪೂಜಾರಿ ವಿಡಿಯೋ ಗಾಗಿ ನೆರೆಮನೆಯ ಸ್ನಾನಗೃಹದಲ್ಲಿ ಮೊಬೈಲ್ ಇಟ್ಟಿದ್ದನು. ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋ ಗಾಗಿ ಈತ ಮೊಬೈಲ್ ಅಡಗಿಸಿ ಇಟ್ಟಿದ್ದನು.ಆದರೆ ಯುವತಿಯ ಬದಲಾಗಿ ಯುವತಿಯ ಅಣ್ಣ ಬಾತ್ ರೂಂ ಗೆ ಸ್ನಾನಕ್ಕಾಗಿ ಬಂದಿದ್ದನು.

ಬಾತ್ ರೂಂ ನಲ್ಲಿ ಮೊಬೈಲ್ ಇರುವುದನ್ನು ಯುವತಿಯ ಅಣ್ಣ ಗಮನಿಸಿದ್ದಾನೆ. ಈ ವೇಳೆ ಸುಮಂತ್ ಯುವತಿಯ ಅಣ್ಣನ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಮಂತ್ ವಿರುದ್ಧ ಯುವತಿಯ ಅಣ್ಣ ಪ್ರಜ್ವಲ್ ಮುಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಸುಮಂತ್ ಪೂಜಾರಿಯನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು