6:28 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು