7:05 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು