4:46 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು