3:03 AM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು