5:09 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು