7:09 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು