4:03 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು