1:34 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನೆಲೆ ನಿಲ್ಲಲಿದೆ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ: ತುಮಕೂರಿನಿಂದ ಶಿಲೆ ಆಗಮನ

25/08/2022, 14:33

ಸಂತೋಷ್ ಅತ್ತಿಕೆರೆ ಚಿಕ್ಕ ಮಂಗಳೂರು

info.reporterkarnataka@gmail.com

ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್‍ಗಂಡಿ ಎಂಬ ಸ್ಥಳದಲ್ಲಿರುವ ಆಂಜನೇಯನ ಗುಡಿ ಬಳಿ ಈ 21 ಅಡಿ ಎತ್ತರದ ಆಂಜನೇಯ ನೆಲೆ ನಿಲ್ಲಲಿದ್ದಾನೆ. ಈಗಾಗಲೇ ಮೂರ್ತಿ ಕೆತ್ತನೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಸಿದ್ಧತೆ ನಡೆದಿದ್ದು, ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಕೃಷ್ಣಶಿಲೆ ಕಲ್ಲುಗಳು ಕೂಡ ಚಿಕ್ಕಮಗಳೂರು ನಗರಕ್ಕೆ ಆಗಮಿಸಿವೆ. ನಗರದ ದ್ವಾರಬಾಗಿಲು ದಾಸರಹಳ್ಳಿ ಬಳಿ ಕಲ್ಲುಗಳಿಗೆ ಪೂಜೆ ಮಾಡಿ ಪುರಪ್ರವೇಶ ಮಾಡಿಕೊಳ್ಳಲಿದ್ದಾರೆ. ಕಲ್ಲಿನ ಜೊತೆ ಶಿಲ್ಪಿಗಳೂ ಕೂಡ ಆಗಮಿಸಿದ್ದಾರೆ.


ಮೂರ್ತಿಯನ್ನ ಪ್ರತಿಷ್ಠಾಪಿಸುವ ಜಾಗದಲ್ಲೇ ಕೆತ್ತನೇ ಮಾಡಬೇಕೋ ಅಥವ ಬೇರೇಡೆ ಕೆತ್ತನೆ ಮಾಡಿ ಅಲ್ಲಿಗೆ ಕೊಂಡೊಯ್ದು ಪ್ರತಿಷ್ಠಾಪಿಸಬೇಕೋ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಮೂರ್ತಿ ಕವಿಕಲ್‍ಗಂಡಿ ಬಳಿ ನೆಲೆ ನಿಂತರೇ ಸುತ್ತಮುತ್ತಲಿನ ಸುಮಾರು 30 ಕಿ.ಮೀ. ದೂರಕ್ಕೂ ಈ ಮೂರ್ತಿ ಕಾಣುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಸಾವಿರಾರು ಭಕ್ತರು ದತ್ತಪೀಠಕ್ಕೆ ಬಂದು ಪ್ರಕೃತಿ ಮಧ್ಯೆ ನೆಲೆಸಿರುವ ದತ್ತಾತ್ತೇಯರ ದರ್ಶನ ಮಾಡುತ್ತಿದ್ದಾರೆ. ಈ ಮೂರ್ತಿ ನೆಲೆ ನಿಂತರೇ ಕಾಫಿನಾಡು ದೇಶದ ಅತ್ಯಂತ ಹೆಸರಾಂತ ಪ್ರವಾಸಿ ತಾಣವಾಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. ದೇಶಾದ್ಯಂತ ಇರೋ ಲಕ್ಷಾಂತರ ಆಂಜನೇಯ ಭಕ್ತರು ಕಾಫಿನಾಡ ಪ್ರಕೃತಿ ಸೌಂದರ್ಯದ ಆಂಜನೇಯ ದರ್ಶನವನ್ನೂ ಪಡೆಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು