5:28 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ

03/05/2024, 11:20

ಕಾಸರಗೋಡು(reporterkarnataka.com): ಮಗಳ ಮದುವೆಯ ಮದಿರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಇತ್ತ ತಂದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಾಸರಗೋಡು ಸಮೀಪದ ಮುಳ್ಳೇರಿಯಾದಲ್ಲಿ ನಡೆದಿದೆ.
ಮುಳ್ಳೇರಿಯ ಸಮೀಪದ ಕಾರ್ಲೆ ನಿವಾಸಿ ರಾಜ ರಾವ್‌ (51) ಮೃತಪಟ್ಟ ವ್ಯಕ್ತಿ. ರಾಜ ರಾವ್ ಅವರ ಮಗಳ ಮದುವೆ ಮೇ 2ರಂದು ಕರ್ಮಂತೋಡಿಯ ಆಡಿಟೋರಿಯಂನಲ್ಲಿ ನಡೆಯಲಿತ್ತು. ಮದುವೆಯ ಹಿಂದಿನ ದಿನ ಮದರಂಗಿ ಶಾಸ್ತ್ರ ಮನೆಯಲ್ಲಿ ಏರ್ಪಡಿಸಲಾಗಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳು ನಡೆಯುತ್ತಿದ್ದಂತೆ ರಾಜ ರಾವ್ ಅವರು ತನ್ನ ಸ್ಕೂಟರ್‌ನಲ್ಲಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದರು. ಅವರ ಮೊಬೈಲಿಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಲಭಿಸಲಿಲ್ಲ. ಇದರಿಂದ ಹುಡುಕಾಟ ನಡೆಯುತ್ತಿದ್ದಾಗ ಅವರ ಸ್ಕೂಟರ್ ದೇಲಂಪಾಡಿ ಬಳಿ ಪತ್ತೆಯಾಗಿತ್ತು. ನಂತರ ತೀವ್ರ ಹುಡುಕಾಟ ನಡೆಸುತ್ತಿದ್ದಂತೆ ದೇಲಂಪಾಡಿ ಸಮೀಪ ಮರದಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಜಯಲಕ್ಷ್ಮಿ, ಮಕ್ಕಳಾದ ದೀಪ್ತಿ, ದೀಕ್ಷಾ ಅವರನ್ನು ಅಗಲಿದ್ದಾರೆ.
ಆದೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು