2:52 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ

03/05/2024, 11:20

ಕಾಸರಗೋಡು(reporterkarnataka.com): ಮಗಳ ಮದುವೆಯ ಮದಿರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಇತ್ತ ತಂದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಾಸರಗೋಡು ಸಮೀಪದ ಮುಳ್ಳೇರಿಯಾದಲ್ಲಿ ನಡೆದಿದೆ.
ಮುಳ್ಳೇರಿಯ ಸಮೀಪದ ಕಾರ್ಲೆ ನಿವಾಸಿ ರಾಜ ರಾವ್‌ (51) ಮೃತಪಟ್ಟ ವ್ಯಕ್ತಿ. ರಾಜ ರಾವ್ ಅವರ ಮಗಳ ಮದುವೆ ಮೇ 2ರಂದು ಕರ್ಮಂತೋಡಿಯ ಆಡಿಟೋರಿಯಂನಲ್ಲಿ ನಡೆಯಲಿತ್ತು. ಮದುವೆಯ ಹಿಂದಿನ ದಿನ ಮದರಂಗಿ ಶಾಸ್ತ್ರ ಮನೆಯಲ್ಲಿ ಏರ್ಪಡಿಸಲಾಗಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳು ನಡೆಯುತ್ತಿದ್ದಂತೆ ರಾಜ ರಾವ್ ಅವರು ತನ್ನ ಸ್ಕೂಟರ್‌ನಲ್ಲಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದರು. ಅವರ ಮೊಬೈಲಿಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಲಭಿಸಲಿಲ್ಲ. ಇದರಿಂದ ಹುಡುಕಾಟ ನಡೆಯುತ್ತಿದ್ದಾಗ ಅವರ ಸ್ಕೂಟರ್ ದೇಲಂಪಾಡಿ ಬಳಿ ಪತ್ತೆಯಾಗಿತ್ತು. ನಂತರ ತೀವ್ರ ಹುಡುಕಾಟ ನಡೆಸುತ್ತಿದ್ದಂತೆ ದೇಲಂಪಾಡಿ ಸಮೀಪ ಮರದಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಜಯಲಕ್ಷ್ಮಿ, ಮಕ್ಕಳಾದ ದೀಪ್ತಿ, ದೀಕ್ಷಾ ಅವರನ್ನು ಅಗಲಿದ್ದಾರೆ.
ಆದೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು