5:36 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮುಂಬೈ ಟು ಮಂಗಳೂರು ಡ್ರಗ್ಸ್ ಸರಬರಾಜು: ವಿದ್ಯಾರ್ಥಿಗಳೇ ಗುರಿ; 6 ಮಂದಿಯ ಬಂಧನ

05/03/2026, 21:26

ಮಂಗಳೂರು(reporterkarnataka.com): ನಗರದ​ ವಿವಿಧೆಡೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿದ ಮೇಲೆ 6 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮತ್ತು ಹೈಡ್ರೋ ವೀಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
​ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಲಾಸಿಕ್ ಕಂಫರ್ಟ್ ಲಾಡ್ಜ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಸಯ್ಯದ್ ಅಫ್ರೀದಿ, ಮಕ್ಸೂದ್ ಸಾಗ್, ಅಹಮ್ಮದ್ ಅಲಿ ಅರ್ಫಾನ್ ಮತ್ತು ಫೆಲಿಕ್ಸ್ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ 53.87 ಗ್ರಾಂ ಎಂಡಿಎಂಎ, 103.20 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಎಂಜಿ ಹೆಕ್ಟರ್ ವಾಹನವನ್ನು ಜಪ್ತಿ ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಉತ್ತರ ಠಾಣಾ ಪೊಲೀಸರು ಬಂದರ್‌ನ ಗ್ರೀನ್ ಪಾರ್ಕ್ ಮೈದಾನದ ಬಳಿ ದಾಳಿ ನಡೆಸಿ ಎಡೆಲ್ ರೋಚ್ ಮತ್ತು ಆರೋನ್ ವಿಶಾಲ್ ಎಂಬುವವರನ್ನು ಬಂಧಿಸಿದ್ದು, ಅವರಿಂದ ಸುಮಾರು 1 ಕೆಜಿಗೂ ಅಧಿಕ ಗಾಂಜಾ ಮತ್ತು ಮಾರುತಿ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆದಿದ್ದಾರೆ.
​ಪೊಲೀಸ್ ತನಿಖೆಯ ವೇಳೆ ಡ್ರಗ್ಸ್ ಜಾಲದ ಅಂತರರಾಜ್ಯ ನಂಟು ಬಯಲಾಗಿದೆ. ಮುಂಬೈ ಮೂಲದ ಸಂದೀಪ್ ಶೆಟ್ಟಿ ಎಂಬಾತ ಹೈಡ್ರೋ ವೀಡ್ ಗಾಂಜಾವನ್ನು ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸುತ್ತಿದ್ದ ಎನ್ನಲಾಗಿದೆ. ಅಲ್ಲಿಂದ ಮಂಗಳೂರಿಗೆ ತಲುಪಿಸಲು ಎಡೆಲ್ ರೋಚ್‌ನನ್ನು ನೇಮಿಸಿಕೊಳ್ಳಲಾಗಿತ್ತು. ಈ ಜಾಲವು ವ್ಯವಸ್ಥಿತವಾಗಿ ಬೆಂಗಳೂರಿನಿಂದ ಮಾದಕ ವಸ್ತುಗಳನ್ನು ತರಿಸಿ ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು