11:55 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಮುಂಬರುವ ಚುನಾವಣೆ; ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಮತ್ತೆ ಅಧಿಕಾರಕ್ಕೆ: ಅಮಿತ್ ಶಾ ವಿಶ್ವಾಸ

02/09/2021, 22:59

ದಾವಣಗೆರೆ(reporterkarnataka.com):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ಗುರುವಾರ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಸಾರ್ವಜನಿಕ ಜೀವನದಲ್ಲಿ, ಆಡಳಿತದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಯಡಿಯೂರಪ್ಪಜೀ ಅವರೇ ಕರ್ನಾಟಕ ಬಿಜೆಪಿಯ ನಾಯಕತ್ವವನ್ನು ಬೇರೆಯವರಿಗೆ ವಹಿಸುವ ಕುರಿತು ತೀರ್ಮಾನ ಕೈಗೊಂಡರು. ಬಿಜೆಪಿಯು ಬಸವರಾಜ ಬೊಮ್ಮಾಯಿ ಅವರಿಗೆ ನೂತನ ಮುಖ್ಯಮಂತ್ರಿಯ ಜವಾಬ್ದಾರಿ ವಹಿಸಲು ನಿರ್ಣಯಿಸಿತು. ಅದರಂತೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದು ಶಾ ನುಡಿದರು.

ಕರ್ನಾಟಕದ ಅಭಿವೃದ್ಧಿಗೆ ವಿಶೇಷವಾಗಿ ರೈತರ ಮತ್ತು ಹಳ್ಳಿಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರು ತನ್ನ ಎರಡು ಅವಧಿಯಲ್ಲಿಯೂ ಹೆಚ್ಚಿನ ಒತ್ತು ನೀಡಿದರು. ಇದೀಗ ಬೊಮ್ಮಾಯಿ ಅವರು ಹಲವು  ಮಹತ್ವಪೂರ್ಣವಾದ ಹೊಸ ಉಪಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಪೊಲೀಸರ ಗೌರವ ವಂದನೆ, ಹೂಗುಚ್ಛ ಸೇರಿ ಹಲವು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಇತ್ತಿದ್ದಾರೆ. ಪಾರದರ್ಶಕತೆ ತರಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು