12:00 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಮುಂಬರುವ ದಿನಗಳಲ್ಲಿ ತುಳುವಿಗೆ ರಾಜ್ಯ ಭಾಷೆ ಸ್ಥಾನಮಾನ: ಶಾಸಕ ವೇದವ್ಯಾಸ ಕಾಮತ್ ವಿಶ್ವಾಸ

24/03/2023, 20:41

ಮಂಗಳೂರು(reporterkarnataka.com): ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದು, ಅದರ ಫಲವಾಗಿ ಮುಂಬರುವ ದಿನಗಳಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನಗಳು ಲಭಿಸಲಿವೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಶುಕ್ರವಾರ ನಗರದ ತುಳುಭವನದಲ್ಲಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 360 ಲಕ್ಷ ರೂ.ಗಳ ಅನುದಾನದಿಂದ ನಿರ್ಮಿಸಲಾದ ತುಳುಭವನದ ಹೆಚ್ಚುವರಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಹಲವಾರು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಿದೆ. ಅದಕ್ಕೆ ಹಲವು ಹಂತಗಳು ಇವೆ, ಆ ಪ್ರಕ್ರಿಯೆಗಳೆಲ್ಲಾ ಸಾಗುತ್ತಿದ್ದು, ಅದಕ್ಕೆ ಸಮಯ ಬೇಕಿರುವ ಕಾರಣ ಮುಂಬರುವ ದಿನಗಳಲ್ಲಿ ಆ ಪ್ರಯತ್ನ ಫಲಕಾರಿಯಾಗಲಿದೆ. ಈ ಪ್ರಯತ್ನವನ್ನು ಕೈ ಬಿಡುವುದಿಲ್ಲ, ಅದಕ್ಕೆ ತುಳುನಾಡ ಜನರ ಪ್ರಾಮಾಣಿಕ ಹೋರಾಟವೂ ಇದೆ ಎಂದರು.


ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಅವರು ಮಾತನಾಡಿ, ಕನ್ನಡ – ತುಳು ಸಹೋದರ ಭಾಷೆಗಳು, ಈ ಎರಡು ಭಾಷೆಗಳ ನಡುವೆ ಸಾಮರಸ್ಯದ ಕೂಟವಿದೆ. ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳುವಿನಲ್ಲಿ ಗ್ರಾಮೀಣ ಪ್ರದೇಶದ ಮಣ್ಣಿನ ಸೊಗಡಿದೆ, ಮೂಲತಃ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳು ಭಾಷೆಯ ಬಳಕೆ ಹೆಚ್ಚು ಎಂದು ಹೇಳಿದರು.
ಹಲವಾರು ತುಳು ಶಾಸನಗಳು ಲಭ್ಯವಿದೆ, ಪ್ರಪಂಚದಲ್ಲಿ ಎರಡು ಕೋಟಿ ಜನರು ತುಳು ಮಾತನಾಡುವವರನ್ನು ಕಾಣಬಹುದಾಗಿದ್ದು, ವಿದೇಶದಲ್ಲಿರುವ ಹೆಚ್ಚಿನ ಸಂಖ್ಯೆಯ ಕನ್ನಡಿಗರಲ್ಲಿ ತುಳುವರು ಅಗ್ರಸ್ಥಾನದಲ್ಲಿದ್ದಾರೆ ಎಂದು ಹೇಳಿದರು.
ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮಹಾನಗರ ಪಾಲಿಕೆ ಸದಸ್ಯರಾದ ಸುಧೀರ್, ರಾಧಾಕೃಷ್ಣ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ವೇದಿಕೆಯಲ್ಲಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ದಿನೇಶ್ ಸುವರ್ಣಾ ರಾಯಿ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು