11:06 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮುಂಬರುವ ಜಿಪಂ, ತಾಪಂ ಚುನಾವಣೆಗೆ ಸಿದ್ದರಾಗಿ: ಗುತ್ತಿಗಾರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಲಹೆ

27/07/2024, 16:19

ಗುತ್ತಿಗಾರು(reporterkarnataka.com): ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಗುತ್ತಿಗಾರು ವಲಯ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ
ತಯಾರಾಗುವಂತೆ ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್. ಜಯಪ್ರಕಾಶ್ ರೈ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಮುಖರಾದ ಗಿರೀಶ್ ಕೊರಂಬಟ, ಎಸ್. ಸಿ ಘಟಕದ ಅಧ್ಯಕ್ಷ ಪರಮೇಶ್ವರ ಕೆಂಬಾರೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಮುಖರಾದ ಹರ್ಷಿತ್ ಕೊರಂಬಟ, ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕ ಉಪಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ, ಡಿಸಿಸಿ ಸದಸ್ಯ ನಂದರಾಜ್ ಸಂಕೇಶ, ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಸಾಮಾಜಿಕ ಜಾಲತಾಣ ಮಾಜಿ ಸಂಚಾಲಕ ಚೇತನ್ ಕಜೆಗದ್ದೆ ಭಾಗವಹಿಸಿದ್ದರು. ಗುತ್ತಿಗಾರು ವಲಯ ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು. ದಿನೇಶ್ ಸರಸ್ವತಿ ಮಹಲ್ ಕಾರ್ಯಕ್ರಮ ನಿರೂಪಿಸಿದರು.
ಸಭೆಯ ಬಳಿಕ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಂತರ ತೀವ್ರ ಮಳೆ -ಗಾಳಿಗೆ ಅಪಾರ ನಷ್ಟ ಅನುಭವಿಸಿದ ವಲ್ಪಾರೆಯ ಕೃಷಿಕರ ಮನೆಗೆ ತೆರಳಿ ನಷ್ಟ ಸಂಭವಿಸಿದ ಅಡಿಕೆ ತೋಟ ವೀಕ್ಷಿಸಿ ಪರಿಹಾರ ಒದಗಿಸುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು