4:52 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್

05/08/2023, 13:51

ಉಡುಪಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರ ಬಾಯಿಯಲ್ಲಿ ತಾನು ಬಿಜೆಪಿ ತ್ಯಜಿಸುವ ಅಪಪ್ರಚಾರ ನಡೆಯುತ್ತಿದೆ. ನಾನು ರಾಜಕೀಯ ನಿವೃತ್ತಿಯಾಗುವವರೆಗೆ ಅಥವಾ ನನ್ನ ದೇಹಾಂತ್ಯವಾಗುವವರೆಗೂ ನಾನು ಬಿಜೆಪಿಯಲ್ಲಿ ಮುಂದುವರಿಯುತ್ತೇನೆ. ಆ ಮೂಲಕ ನನ್ನ ಕುರಿತಾದ ಅಪಪ್ರಚಾರಕ್ಕೆ ತೆರೆ ಎಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ನುಡಿದರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಟಿಕೆಟ್ ಕೊಡುವ ಬಗ್ಗೆ ಸ್ವಲ್ಪ ಮಟ್ಟಿಗೆ ವಿಶ್ವಾಸವಿದೆ. ಆದರೆ ಪೂರ್ಣ ವಿಶ್ವಾಸವಿಲ್ಲ. ಯಾಕೆಂದರೆ ನನಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದ ಯಾವುದೇ ನಾಯಕರು ಭರವಸೆ ನೀಡಿಲ್ಲ. ನಾನು ಬಿಜೆಪಿ ಸೇರಿ ಹಲವು ತಿಂಗಳಾದರೂ ಪಕ್ಷ ನನಗೆ ಯಾವುದೇ ಪ್ರಮುಖ ಜವಾಬ್ದಾರಿ ಕೊಟ್ಟಿಲ್ಲ. ವಿಧಾನಸಭೆ ಚುನಾವಣೆಗೆ ಒಂದು ತಿಂಗಳ ಮುನ್ನ ಕಾರವಾರ, ಭಟ್ಕಳ, ಬೈಂದೂರು, ಉಡುಪಿ, ಕುಂದಾಪುರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪಕ್ಷ ಸೂಚಿಸಿತ್ತು. ಅಲೆಲ್ಲ ಅಳಿಲ ಸೇವೆ ಮಾಡಿದ್ದೇನೆ ಎಂದು ಅವರು ಹೇಳಿದರು.
ಉಡುಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016-18ರ ಅವಧಿಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿತ್ತು ಎಂದು ಹೇಳಿದ್ದಾರೆ. ಕಾನೂನು- ಸುವ್ಯವಸ್ಥೆ ಯಲ್ಲೂ ಉಡುಪಿ ಪ್ರಥಮ ಸ್ಥಾನದಲ್ಲಿತ್ತು. ಆ ಅವಧಿಯಲ್ಲಿ ನಾನು ಉಸ್ತುವಾರಿ ಸಚಿವನಾಗಿದ್ದೆ. ಬಿಜೆಪಿ ನನ್ನ ಟ್ರ್ಯಾಕ್ ರೆಕಾರ್ಡ್ ಅವಲೋಕಿಸಿ ನನಗೆ ಟಿಕೆಟ್ ನೀಡುವ ಭರವಸೆ ಇದೆ. ನನಗೆ ಟಿಕೆಟ್ ನೀಡದಿದ್ದರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು