6:58 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಂಟೀ ಸ್ಪರ್ಧೆ: ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ನಿರ್ಣಯ

01/09/2023, 20:47

ಮುಂಬೈ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಸೀಟುಗಳಲ್ಲಿ ಒಟ್ಟಿಗೆ ಸ್ಪರ್ಧಿಸಲು ಮುಂಬೈನಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿತು
ಬಿಹಾರದ ಪಾಟ್ನಾ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಪ್ರತಿಪಕ್ಷಗಳ ನಾಯಕರು ಎರಡು ಸಭೆಗಳನ್ನು ಮಾಡಿದ್ದು, ಗುರುವಾರದಿಂದ ಮುಂಬೈನಲ್ಲಿ ಮೂರನೇ ಸಭೆ ನಡೆಯಿತು. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಪ್ರತಿಪಕ್ಷಗಳು ಜಂಟಿಯಾಗಿ ಸ್ಪರ್ಧೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದೇವೆ ಎಂದು ಇಂಡಿಯಾ ನಾಯಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.


ಇದರ ಜೊತೆಗೆ, ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ಪ್ರಕ್ರಿಯೆ ತಕ್ಷಣವೇ ಪ್ರಾರಂಭಿಸಲಾಗುತ್ತದೆ. ಅದಷ್ಟು ಬೇಗ ಸೀಟು ಕೊಡು-ಕೊಳ್ಳುವಿಕೆಯ ಪ್ರಕ್ರಿಯೆಯನ್ನು ಸಹಕಾರಿ ಮನೋಭಾವದಲ್ಲಿ ಮುಗಿಸಲಾಗುತ್ತದೆ. ಸಾರ್ವಜನಿಕರ ಸಮಸ್ಯೆಯ ವಿಷಯಗಳನ್ನು ಮುಂದಿಟ್ಟುಕೊಂಡು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವೇ ರ್ಯಾಲಿಗಳನ್ನೂ ನಡೆಸುತ್ತೇವೆ. ವಿವಿಧ ಭಾಷೆಗಳಲ್ಲಿ ‘ಜುಡೇಗಾ ಭಾರತ್, ಜೀತೇಗಾ ಇಂಡಿಯಾ’ ಎಂಬ ವಿಷಯದ ಕುರಿತು ತಮ್ಮ ಸಂವಹನ ತಂತ್ರಗಳು, ಪ್ರಚಾರಗಳನ್ನು ಸಂಘಟಿಸಲು ನಿರ್ಣಯಿಸಲಾಗಿದೆ ಎಂದ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು