9:51 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಂಟೀ ಸ್ಪರ್ಧೆ: ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ನಿರ್ಣಯ

01/09/2023, 20:47

ಮುಂಬೈ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಸೀಟುಗಳಲ್ಲಿ ಒಟ್ಟಿಗೆ ಸ್ಪರ್ಧಿಸಲು ಮುಂಬೈನಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿತು
ಬಿಹಾರದ ಪಾಟ್ನಾ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಪ್ರತಿಪಕ್ಷಗಳ ನಾಯಕರು ಎರಡು ಸಭೆಗಳನ್ನು ಮಾಡಿದ್ದು, ಗುರುವಾರದಿಂದ ಮುಂಬೈನಲ್ಲಿ ಮೂರನೇ ಸಭೆ ನಡೆಯಿತು. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಪ್ರತಿಪಕ್ಷಗಳು ಜಂಟಿಯಾಗಿ ಸ್ಪರ್ಧೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದೇವೆ ಎಂದು ಇಂಡಿಯಾ ನಾಯಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.


ಇದರ ಜೊತೆಗೆ, ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ಪ್ರಕ್ರಿಯೆ ತಕ್ಷಣವೇ ಪ್ರಾರಂಭಿಸಲಾಗುತ್ತದೆ. ಅದಷ್ಟು ಬೇಗ ಸೀಟು ಕೊಡು-ಕೊಳ್ಳುವಿಕೆಯ ಪ್ರಕ್ರಿಯೆಯನ್ನು ಸಹಕಾರಿ ಮನೋಭಾವದಲ್ಲಿ ಮುಗಿಸಲಾಗುತ್ತದೆ. ಸಾರ್ವಜನಿಕರ ಸಮಸ್ಯೆಯ ವಿಷಯಗಳನ್ನು ಮುಂದಿಟ್ಟುಕೊಂಡು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವೇ ರ್ಯಾಲಿಗಳನ್ನೂ ನಡೆಸುತ್ತೇವೆ. ವಿವಿಧ ಭಾಷೆಗಳಲ್ಲಿ ‘ಜುಡೇಗಾ ಭಾರತ್, ಜೀತೇಗಾ ಇಂಡಿಯಾ’ ಎಂಬ ವಿಷಯದ ಕುರಿತು ತಮ್ಮ ಸಂವಹನ ತಂತ್ರಗಳು, ಪ್ರಚಾರಗಳನ್ನು ಸಂಘಟಿಸಲು ನಿರ್ಣಯಿಸಲಾಗಿದೆ ಎಂದ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು