7:32 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಮುಂಬರುವ ವಿಧಾನಸಭೆ ಚುನಾವಣೆ: ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ನಿಂದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ

21/01/2023, 23:39

ಮಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದರು.

ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸಿಸಿಐ, ಕ್ರೆಡೈಯಲ್, ರೈತರು, ಅಡಿಕೆ ಬೆಳೆಗಾರರು, ಮೀನುಗಾರರು, ರಿಕ್ಷಾ, ಬಸ್, ವಿದ್ಯಾರ್ಥಿ ಮತ್ತು ಎನ್‌ಜಿಒ ಸಂಘಟನೆಗಳು ಹಾಗೂ ಪಂಚಾಯತ್‌ರಾಜ್ ವ್ಯವಸ್ಥೆಯ ಸಂಘಟನೆಗಳ ಮುಖಂಡರ ಜತೆ ಇಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತೀಯ ಭಾವನೆ ಕೆರಳಿಸಿ ಅಶಾಂತಿ ಸೃಷ್ಟಿಸಿರುವುದನ್ನು ಅಲ್ಲಗಳೆಯುವಂತಿಲ್ಲ. ಅದಕ್ಕೆ ಕಡಿವಾಣ ಹಾಕಿ ಶಾಂತಿ ನೆಲೆಸಲು ಪ್ರಯತ್ನ ಮಾಡಬೇಕಿದೆ. ಕಾಂಗ್ರೆಸ್ ಎಂದೂ ಕೂಡ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಅಧಿಕಾರಕ್ಕೆ ಬಂದ ಬಳಿಕ ಈಡೇರಿಸಲು ಸಾಧ್ಯವಾಗುವಂತಹ ಭರವಸೆಗಳನ್ನು ಮಾತ್ರ ಪ್ರಣಾಳಿಕೆಯಲ್ಲಿ ಸೇರಿಸಲಾಗುತ್ತದೆ. 200 ಯುನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಭರವಸೆಯನ್ನು ನೀಡಲಾಗಿದೆ. ಹಣಕಾಸಿನ ಲೆಕ್ಕಾಚಾರ ಹಾಕಿಯೇ ಇದನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಶೇ 40 ಕಮಿಷನ್ ಆರೋಪ ಈಗಲೂ ಕೇಳಿ ಬರುತ್ತಿವೆ. ಗುತ್ತಿಗೆದಾರರ ಸಂಘಟನೆಗಳ ಮುಖಂಡರು ಈ ಬಗ್ಗೆ ಪ್ರಧಾನಿಗೆ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದರು.
ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಆದರೆ ಭಿನ್ನ ಅಭಿಪ್ರಾಯವಿದೆ. ಅದು ಸಹಜವಾದುದು. ಅದನ್ನು ಸರಿಪಡಿಸಿಕೊಂಡು ಚುನಾವಣೆಯನ್ನು ಎದುರಿಸಲಾಗುವುದು. ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೇರಲಿದೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರಕಾರ ರಚಿಸುವಂತಹ ವಾತಾವರಣ ಸೃಷ್ಟಿಯಾಗದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ್ ಜೋಡೋ ಯಾತ್ರೆಯಿಂದ ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ವ್ಯಕ್ತಿತ್ವದಲ್ಲಿ ಭಾರಿ ಬದಲಾವಣೆಯಾಗಿದೆ ಎಂಬ ಮಾತು ರಾಜಕೀಯ ವಿಶ್ಲೇಷಕರಿಂದ ಕೇಳಿ ಬರುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಆಗಿದೆ ಎಂದರು.

ರಾಜ್ಯ ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಜೆ.ಆರ್.ಲೋಬೊ, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಮುಖಂಡರಾದ ಜಿ.ಎ.ಬಾವಾ, ಇಬ್ರಾಹೀಂ ಕೋಡಿಜಾಲ್, ಕವಿತಾ ಸನಿಲ್, ಪ್ರೊ. ರಾಧಾಕೃಷ್ಣ, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೆ.ಕೆ.ಶಾಹುಲ್ ಹಮೀದ್, ಕೃಪಾ ಆಳ್ವ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು