6:55 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಮುಂಬರುವ ವಿಧಾನಸಭೆ ಚುನಾವಣೆ: ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ನಿಂದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ

21/01/2023, 23:39

ಮಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದರು.

ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸಿಸಿಐ, ಕ್ರೆಡೈಯಲ್, ರೈತರು, ಅಡಿಕೆ ಬೆಳೆಗಾರರು, ಮೀನುಗಾರರು, ರಿಕ್ಷಾ, ಬಸ್, ವಿದ್ಯಾರ್ಥಿ ಮತ್ತು ಎನ್‌ಜಿಒ ಸಂಘಟನೆಗಳು ಹಾಗೂ ಪಂಚಾಯತ್‌ರಾಜ್ ವ್ಯವಸ್ಥೆಯ ಸಂಘಟನೆಗಳ ಮುಖಂಡರ ಜತೆ ಇಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತೀಯ ಭಾವನೆ ಕೆರಳಿಸಿ ಅಶಾಂತಿ ಸೃಷ್ಟಿಸಿರುವುದನ್ನು ಅಲ್ಲಗಳೆಯುವಂತಿಲ್ಲ. ಅದಕ್ಕೆ ಕಡಿವಾಣ ಹಾಕಿ ಶಾಂತಿ ನೆಲೆಸಲು ಪ್ರಯತ್ನ ಮಾಡಬೇಕಿದೆ. ಕಾಂಗ್ರೆಸ್ ಎಂದೂ ಕೂಡ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಅಧಿಕಾರಕ್ಕೆ ಬಂದ ಬಳಿಕ ಈಡೇರಿಸಲು ಸಾಧ್ಯವಾಗುವಂತಹ ಭರವಸೆಗಳನ್ನು ಮಾತ್ರ ಪ್ರಣಾಳಿಕೆಯಲ್ಲಿ ಸೇರಿಸಲಾಗುತ್ತದೆ. 200 ಯುನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಭರವಸೆಯನ್ನು ನೀಡಲಾಗಿದೆ. ಹಣಕಾಸಿನ ಲೆಕ್ಕಾಚಾರ ಹಾಕಿಯೇ ಇದನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಶೇ 40 ಕಮಿಷನ್ ಆರೋಪ ಈಗಲೂ ಕೇಳಿ ಬರುತ್ತಿವೆ. ಗುತ್ತಿಗೆದಾರರ ಸಂಘಟನೆಗಳ ಮುಖಂಡರು ಈ ಬಗ್ಗೆ ಪ್ರಧಾನಿಗೆ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದರು.
ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಆದರೆ ಭಿನ್ನ ಅಭಿಪ್ರಾಯವಿದೆ. ಅದು ಸಹಜವಾದುದು. ಅದನ್ನು ಸರಿಪಡಿಸಿಕೊಂಡು ಚುನಾವಣೆಯನ್ನು ಎದುರಿಸಲಾಗುವುದು. ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೇರಲಿದೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರಕಾರ ರಚಿಸುವಂತಹ ವಾತಾವರಣ ಸೃಷ್ಟಿಯಾಗದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ್ ಜೋಡೋ ಯಾತ್ರೆಯಿಂದ ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ವ್ಯಕ್ತಿತ್ವದಲ್ಲಿ ಭಾರಿ ಬದಲಾವಣೆಯಾಗಿದೆ ಎಂಬ ಮಾತು ರಾಜಕೀಯ ವಿಶ್ಲೇಷಕರಿಂದ ಕೇಳಿ ಬರುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಆಗಿದೆ ಎಂದರು.

ರಾಜ್ಯ ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಜೆ.ಆರ್.ಲೋಬೊ, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಮುಖಂಡರಾದ ಜಿ.ಎ.ಬಾವಾ, ಇಬ್ರಾಹೀಂ ಕೋಡಿಜಾಲ್, ಕವಿತಾ ಸನಿಲ್, ಪ್ರೊ. ರಾಧಾಕೃಷ್ಣ, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೆ.ಕೆ.ಶಾಹುಲ್ ಹಮೀದ್, ಕೃಪಾ ಆಳ್ವ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು