3:52 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ನಿಷೇಧ?: ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಹೇಳಿದ್ದೇನು? 

09/07/2022, 09:57

ಹೊಸದಿಲ್ಲಿ(reporterkarnataka.com): ಇಂದಿನ ಬದಲಾವಣೆಯ ಹೊಸತನಕ್ಕೆ ಭಾರತವು ನಾನಾ ರೀತಿಯಲ್ಲಿ ಅಭಿವೃದ್ಧಿ ಆಗುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಹೊಸ ಆವಿಷ್ಕಾರಗಳು ನಡೆಯುತ್ತಿದೆ.

ಅದೇ ರೀತಿ ಸಾರಿಗೆ ವಿಭಾಗದಲ್ಲೂ ಬದಲಾವಣೆಯಾಗುತ್ತಿದೆ. ಪ್ರಸುತ್ತ ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗಡ್ಕರಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪರ್ಯಾಯ ಇಂಧನ ಬಳಕೆಯ ಮಹತ್ವದ ಕುರಿತು ಮಾತನಾಡಿದರು.

‘ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಎತ್ತಿ ತೋರಿಸಿದರು. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು