1:40 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ನಿಷೇಧ?: ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಹೇಳಿದ್ದೇನು? 

09/07/2022, 09:57

ಹೊಸದಿಲ್ಲಿ(reporterkarnataka.com): ಇಂದಿನ ಬದಲಾವಣೆಯ ಹೊಸತನಕ್ಕೆ ಭಾರತವು ನಾನಾ ರೀತಿಯಲ್ಲಿ ಅಭಿವೃದ್ಧಿ ಆಗುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಹೊಸ ಆವಿಷ್ಕಾರಗಳು ನಡೆಯುತ್ತಿದೆ.

ಅದೇ ರೀತಿ ಸಾರಿಗೆ ವಿಭಾಗದಲ್ಲೂ ಬದಲಾವಣೆಯಾಗುತ್ತಿದೆ. ಪ್ರಸುತ್ತ ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗಡ್ಕರಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪರ್ಯಾಯ ಇಂಧನ ಬಳಕೆಯ ಮಹತ್ವದ ಕುರಿತು ಮಾತನಾಡಿದರು.

‘ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಎತ್ತಿ ತೋರಿಸಿದರು. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು