5:14 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ನಿಷೇಧ?: ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಹೇಳಿದ್ದೇನು? 

09/07/2022, 09:57

ಹೊಸದಿಲ್ಲಿ(reporterkarnataka.com): ಇಂದಿನ ಬದಲಾವಣೆಯ ಹೊಸತನಕ್ಕೆ ಭಾರತವು ನಾನಾ ರೀತಿಯಲ್ಲಿ ಅಭಿವೃದ್ಧಿ ಆಗುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಹೊಸ ಆವಿಷ್ಕಾರಗಳು ನಡೆಯುತ್ತಿದೆ.

ಅದೇ ರೀತಿ ಸಾರಿಗೆ ವಿಭಾಗದಲ್ಲೂ ಬದಲಾವಣೆಯಾಗುತ್ತಿದೆ. ಪ್ರಸುತ್ತ ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗಡ್ಕರಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪರ್ಯಾಯ ಇಂಧನ ಬಳಕೆಯ ಮಹತ್ವದ ಕುರಿತು ಮಾತನಾಡಿದರು.

‘ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಎತ್ತಿ ತೋರಿಸಿದರು. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು