3:55 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್

07/01/2022, 08:26

ಮಂಗಳೂರು(reporterkarnataka.com): ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಿ ಕ್ಷೇತ್ರದ ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ನೀಡುವ ಯೋಚನೆಯಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನವೀಕರಣಗೊಂಡ‌ ಶಾಲೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. 

ಮಂಗಳೂರು ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡಿನ ದಯಾಂಬು ಸರಕಾರಿ ಪ್ರೌಢಶಾಲೆಯಲ್ಲಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳ ಅಭಿವೃದ್ಧಿಯಿಂದ ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಯುತ್ತದೆ ಎಂದು ಹೇಳಿದರು. 

ಪಾಲಿಕೆ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು ಅವರು ಮಾತನಾಡಿ, ದಯಾಂಬು ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಮನವಿ ಸಲ್ಲಿಸಿದ್ದ ಸಂದರ್ಭದಲ್ಲಿ ಪೂರಕವಾಗಿ ಸ್ಪಂದಿಸಿದ ಅವರು ತಕ್ಷಣವೇ 35 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದರು. 35 ಲಕ್ಷ ರೂಪಾಯಿಯಲ್ಲಿ ತರಗತಿ ಕೊಠಡಿಗಳು ಮತ್ತು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶಾಲೆಯ ಅಭಿವೃದ್ಧಿಯಿಂದ ಈ ಭಾಗದ ಮಕ್ಕಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗಿದೆ ಎಂದರು. 

ಸಭಾಧ್ಯಕ್ಷತೆ ವಹಿಸಿಕೊಂಡಿದ್ದ ಸ್ಥಳೀಯ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್ ಅವರು, ದಯಾಂಬು ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಶಾಸಕರ ಪ್ರಯತ್ನದಿಂದ ಸಮೀಪದಲ್ಲಿ ಅಂಗನವಾಡಿ ನಿರ್ಮಾಣವೂ ಆಗುತ್ತಿದೆ. ಈ ಪರಿಸರದ ಮಕ್ಕಳ ವಿಧ್ಯಾಭ್ಯಾಸಕ್ಕೆ ಶಾಲೆಯ ಅಭಿವೃದ್ಧಿಯ ಅನಿವಾರ್ಯತೆಯನ್ನು ಮನಗಂಡು ಅನುದಾನ ಒದಗಿಸಿದ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗೀತಾನಂದ ಶೆಟ್ಟಿ, ದೇವದಾಸ್ ಶೆಟ್ಟಿ, ಯಶವಂತ್ ವೀರನಗರ, ಸುನಿಲ್ ಕೊಡಕ್ಕಲ್, ಜಗದೀಶ್ ಕೊಟ್ಟಾರಿ ಬಲ್ಲೂರು, ಇಕ್ಬಾಲ್ ಬಲ್ಲೂರುಗುಡ್ಡೆ, ಎಸ್.ಡಿ ಶಾಕಿರ್ ದಯಾಂಬು, ಕಬೀರ್ ಬಲ್ಲೂರುಗುಡ್ಡೆ, ಕಟ್ಟಡ ನಿರ್ಮಾಣಕ್ಕೆ ಸ್ಥಳ ಒದಗಿಸಿದ ಹಾಜಿ ಮಹಮ್ಮದ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಹಮ್ಮದ್ ಬಾವಾ, ದಯಾಂಬು ಮಸೀದಿಯ ಅಧ್ಯಕ್ಷರಾದ ಮೊಹಮ್ಮದ್, ಶಿಕ್ಷಣ ಇಲಾಖೆಯ ಅಧಿಕಾರಿ ಪ್ರಶಾಂತ್,  ಪ್ರೌಢಶಾಲಾ ಮುಖ್ಯ ಶಿಕ್ಷಕ ಪೌಲ್ ರೋಡ್ರೀಗಸ್ ಸ್ವಾಗತಿಸಿ, ಹರಿಣಾಕ್ಷಿ ನಿರೂಪಿಸಿದರು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ಭಾಯಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು