3:59 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಹಸಿರು ಉಳಿಸುವುದು ಅಗತ್ಯ: ಮಹಾದೇವಪ್ಪ

22/08/2021, 10:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಪ್ರಕೃತಿಯ ಸಂಪತ್ತು ಹಸಿರಾಗಿರಲು ಕಾರಣರಾಗಿರುವ ನಾವು ನಮ್ಮ ಉಸಿರು ಉಳಿಯಲು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಮುಂದಿನ ತಲೆಮಾರಿಗೆ ಪ್ರಕೃತಿ ಸಂಪತ್ತು ಕೊಡುಗೆ ಏನೆಂಬುದನ್ನು ತಿಳಿಸಬೇಕೆಂದು ತಾಲೂಕು ಶಿಕ್ಷಣಾಧಿಕಾರಿ ಮಹಾದೇವಪ್ಪ ಹೇಳಿದರು

ನಾಗಮಂಗಲ ಸಿಟಿ ಲಯನ್ಸ್ ಕ್ಲಬ್ ಉಪ್ಪಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪ್ರಜೆಗಳು ಕೊರೊನಾ ಸಂಕಟದಿಂದ ಆಗಿರುವ ಅನಾಹುತಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿಯೊಬ್ಬರು ಗಿಡಮರಗಳನ್ನು ಪೋಷಣೆ ಮಾಡುವ ಮುಖಾಂತರ ಕಾಡು ಉಳಿಸಿ ನಾಡು ಬೆಳೆಸಿ ಪರಿಪಾಠ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಗಿಡ ಮರಗಳನ್ನು ಸಸಿಗಳನ್ನು ನೀಡುವುದರ ಜೊತೆಗೆ ಅವುಗಳ ಪೋಷಣೆಗಳನ್ನು ದಯಮಾಡಿ ಮುಂದೆ ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.

ಪ್ರಕೃತಿಯ ವರದಾನವಾಗಿರುವ ಪರಿಸರವನ್ನು ಎಲ್ಲರೂ ಸಂರಕ್ಷಿಸುವ ಹೂಣೆ ನಮ್ಮದಾಗಿದೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ನಂದ ಕಿಶೋರ್ ಹಾಗೂ ಲಯನ್ಸ್ ರವರುಗಳಾದ ಗೀತಾದಾಸೇಗೌಡ, ವಸಂತ ಶ್ರೀಕಂಠಯ್ಯ ಜೆ.ಸಿ ನಂಜುಂಡೇಗೌಡ, ಬಸವೇಗೌಡ, ಉಗ್ರೇಗೌಡ ಅನೇಕ ಗಣ್ಯರು ಹಾಜರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು