1:10 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಹಸಿರು ಉಳಿಸುವುದು ಅಗತ್ಯ: ಮಹಾದೇವಪ್ಪ

22/08/2021, 10:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಪ್ರಕೃತಿಯ ಸಂಪತ್ತು ಹಸಿರಾಗಿರಲು ಕಾರಣರಾಗಿರುವ ನಾವು ನಮ್ಮ ಉಸಿರು ಉಳಿಯಲು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಮುಂದಿನ ತಲೆಮಾರಿಗೆ ಪ್ರಕೃತಿ ಸಂಪತ್ತು ಕೊಡುಗೆ ಏನೆಂಬುದನ್ನು ತಿಳಿಸಬೇಕೆಂದು ತಾಲೂಕು ಶಿಕ್ಷಣಾಧಿಕಾರಿ ಮಹಾದೇವಪ್ಪ ಹೇಳಿದರು

ನಾಗಮಂಗಲ ಸಿಟಿ ಲಯನ್ಸ್ ಕ್ಲಬ್ ಉಪ್ಪಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪ್ರಜೆಗಳು ಕೊರೊನಾ ಸಂಕಟದಿಂದ ಆಗಿರುವ ಅನಾಹುತಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿಯೊಬ್ಬರು ಗಿಡಮರಗಳನ್ನು ಪೋಷಣೆ ಮಾಡುವ ಮುಖಾಂತರ ಕಾಡು ಉಳಿಸಿ ನಾಡು ಬೆಳೆಸಿ ಪರಿಪಾಠ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಗಿಡ ಮರಗಳನ್ನು ಸಸಿಗಳನ್ನು ನೀಡುವುದರ ಜೊತೆಗೆ ಅವುಗಳ ಪೋಷಣೆಗಳನ್ನು ದಯಮಾಡಿ ಮುಂದೆ ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.

ಪ್ರಕೃತಿಯ ವರದಾನವಾಗಿರುವ ಪರಿಸರವನ್ನು ಎಲ್ಲರೂ ಸಂರಕ್ಷಿಸುವ ಹೂಣೆ ನಮ್ಮದಾಗಿದೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ನಂದ ಕಿಶೋರ್ ಹಾಗೂ ಲಯನ್ಸ್ ರವರುಗಳಾದ ಗೀತಾದಾಸೇಗೌಡ, ವಸಂತ ಶ್ರೀಕಂಠಯ್ಯ ಜೆ.ಸಿ ನಂಜುಂಡೇಗೌಡ, ಬಸವೇಗೌಡ, ಉಗ್ರೇಗೌಡ ಅನೇಕ ಗಣ್ಯರು ಹಾಜರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು