6:15 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಎಸ್.ಮಧು ಬಂಗಾರಪ್ಪ

18/12/2025, 19:04

ಬೆಳಗಾವಿ ಸುವರ್ಣ ವಿಧಾನಸೌಧ (reporterkarnataka.com): ಬರುವ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕುರಿತು ಮಾಹಿತಿಯನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 178935 ಹುದ್ದೆಗಳು ಮಂಜೂರಾಗಿದ್ದು ಈ ಪೈಕಿ 133345 ಹುದ್ದೆಗಳು ಭರ್ತಿಯಾಗಿದ್ದು, 45590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅವರು ವಿವರಿಸಿದರು.
ರಾಜ್ಯದಲ್ಲಿ 5024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು