10:09 PM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು