4:28 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು