10:30 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು