9:38 PM Saturday2 - August 2025
ಬ್ರೇಕಿಂಗ್ ನ್ಯೂಸ್
Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ…

ಇತ್ತೀಚಿನ ಸುದ್ದಿ

ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

31/05/2021, 07:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ. ಕೃಷಿ ಇಲಾಖೆ ಪ್ರಸ್ತಾವನೆ ಪ್ರಕಾರ ಬೀಜ ಪೂರೈಕೆ ಆಗಲಿದೆ. 

ಈ ನಡುವೆ ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜೂನ್ ಮೊದಲನೇ ವಾರ ಬರುವ ಮುಂಗಾರುನಲ್ಲೂ ಉತ್ತಮ ಮಳೆ ಆಗುವ ಲಕ್ಷಣಗಳು ಕಂಡು ಬಂದಿವೆ. ಕೊರೊನಾ ಎರಡನೆಯ ಲಾಕ್ ಡೌನ್  ರೈತರನ್ನು ಸ್ವಲ್ಪ ಕಷ್ಟಕ್ಕೆ ಸಿಲುಕಿಸಿದೆ. ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. 

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕಿ ಡಾ. ಎಸ್ ಪ್ರಿಯಾಂಕ,

ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳು ಬಿತ್ತನೆ ಕುರಿತು ಬೀಜಗಳನ್ನು ಪೂರೈಕೆ ಪ್ರಸ್ತಾವನೆಗೆ ಕಳಿಸಿಕೊಡಲಾಗಿದೆ.

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಈಗಾಗಲೇ ಸೂಚಿಸಲಾಗಿದೆ. ಮಾರಾಟ ದರ ಪಟ್ಟಿ ಹಾಕಿ ಕೋವಿಡ್ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹೇಳಲಾಗಿದೆ.

ಈ ನಡುವೆ ಮಸ್ಕಿ ಕ್ಷೇತ್ರದ ಅಂತರಗಂಗೆ, ಮೆದಿಕಿನಾಳ, ಅಂಕುಶದೊಡ್ಡಿ, ತಲೆಕಾನ್ , ಗುಡದೂರು, ಹಂಪನಾಳ, ನಾಗರಬೆಂಚಿ ಸುತ್ತಮುತ್ತಲಿನ ಗ್ರಾಮಸ್ಥರು ಮುಂಗಾರು ಬಿತ್ತನೆಗಾಗಿ ಭರ್ಜರಿ ಹೊಲಗಳ ಹದ ಮಾಡಿ ಕೆಲಸ ಮಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು