2:41 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

31/05/2021, 07:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ. ಕೃಷಿ ಇಲಾಖೆ ಪ್ರಸ್ತಾವನೆ ಪ್ರಕಾರ ಬೀಜ ಪೂರೈಕೆ ಆಗಲಿದೆ. 

ಈ ನಡುವೆ ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜೂನ್ ಮೊದಲನೇ ವಾರ ಬರುವ ಮುಂಗಾರುನಲ್ಲೂ ಉತ್ತಮ ಮಳೆ ಆಗುವ ಲಕ್ಷಣಗಳು ಕಂಡು ಬಂದಿವೆ. ಕೊರೊನಾ ಎರಡನೆಯ ಲಾಕ್ ಡೌನ್  ರೈತರನ್ನು ಸ್ವಲ್ಪ ಕಷ್ಟಕ್ಕೆ ಸಿಲುಕಿಸಿದೆ. ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. 

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕಿ ಡಾ. ಎಸ್ ಪ್ರಿಯಾಂಕ,

ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳು ಬಿತ್ತನೆ ಕುರಿತು ಬೀಜಗಳನ್ನು ಪೂರೈಕೆ ಪ್ರಸ್ತಾವನೆಗೆ ಕಳಿಸಿಕೊಡಲಾಗಿದೆ.

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಈಗಾಗಲೇ ಸೂಚಿಸಲಾಗಿದೆ. ಮಾರಾಟ ದರ ಪಟ್ಟಿ ಹಾಕಿ ಕೋವಿಡ್ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹೇಳಲಾಗಿದೆ.

ಈ ನಡುವೆ ಮಸ್ಕಿ ಕ್ಷೇತ್ರದ ಅಂತರಗಂಗೆ, ಮೆದಿಕಿನಾಳ, ಅಂಕುಶದೊಡ್ಡಿ, ತಲೆಕಾನ್ , ಗುಡದೂರು, ಹಂಪನಾಳ, ನಾಗರಬೆಂಚಿ ಸುತ್ತಮುತ್ತಲಿನ ಗ್ರಾಮಸ್ಥರು ಮುಂಗಾರು ಬಿತ್ತನೆಗಾಗಿ ಭರ್ಜರಿ ಹೊಲಗಳ ಹದ ಮಾಡಿ ಕೆಲಸ ಮಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು