7:42 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

31/05/2021, 07:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ. ಕೃಷಿ ಇಲಾಖೆ ಪ್ರಸ್ತಾವನೆ ಪ್ರಕಾರ ಬೀಜ ಪೂರೈಕೆ ಆಗಲಿದೆ. 

ಈ ನಡುವೆ ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜೂನ್ ಮೊದಲನೇ ವಾರ ಬರುವ ಮುಂಗಾರುನಲ್ಲೂ ಉತ್ತಮ ಮಳೆ ಆಗುವ ಲಕ್ಷಣಗಳು ಕಂಡು ಬಂದಿವೆ. ಕೊರೊನಾ ಎರಡನೆಯ ಲಾಕ್ ಡೌನ್  ರೈತರನ್ನು ಸ್ವಲ್ಪ ಕಷ್ಟಕ್ಕೆ ಸಿಲುಕಿಸಿದೆ. ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. 

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕಿ ಡಾ. ಎಸ್ ಪ್ರಿಯಾಂಕ,

ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳು ಬಿತ್ತನೆ ಕುರಿತು ಬೀಜಗಳನ್ನು ಪೂರೈಕೆ ಪ್ರಸ್ತಾವನೆಗೆ ಕಳಿಸಿಕೊಡಲಾಗಿದೆ.

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಈಗಾಗಲೇ ಸೂಚಿಸಲಾಗಿದೆ. ಮಾರಾಟ ದರ ಪಟ್ಟಿ ಹಾಕಿ ಕೋವಿಡ್ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹೇಳಲಾಗಿದೆ.

ಈ ನಡುವೆ ಮಸ್ಕಿ ಕ್ಷೇತ್ರದ ಅಂತರಗಂಗೆ, ಮೆದಿಕಿನಾಳ, ಅಂಕುಶದೊಡ್ಡಿ, ತಲೆಕಾನ್ , ಗುಡದೂರು, ಹಂಪನಾಳ, ನಾಗರಬೆಂಚಿ ಸುತ್ತಮುತ್ತಲಿನ ಗ್ರಾಮಸ್ಥರು ಮುಂಗಾರು ಬಿತ್ತನೆಗಾಗಿ ಭರ್ಜರಿ ಹೊಲಗಳ ಹದ ಮಾಡಿ ಕೆಲಸ ಮಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು