12:26 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

31/05/2021, 07:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ. ಕೃಷಿ ಇಲಾಖೆ ಪ್ರಸ್ತಾವನೆ ಪ್ರಕಾರ ಬೀಜ ಪೂರೈಕೆ ಆಗಲಿದೆ. 

ಈ ನಡುವೆ ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜೂನ್ ಮೊದಲನೇ ವಾರ ಬರುವ ಮುಂಗಾರುನಲ್ಲೂ ಉತ್ತಮ ಮಳೆ ಆಗುವ ಲಕ್ಷಣಗಳು ಕಂಡು ಬಂದಿವೆ. ಕೊರೊನಾ ಎರಡನೆಯ ಲಾಕ್ ಡೌನ್  ರೈತರನ್ನು ಸ್ವಲ್ಪ ಕಷ್ಟಕ್ಕೆ ಸಿಲುಕಿಸಿದೆ. ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. 

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕಿ ಡಾ. ಎಸ್ ಪ್ರಿಯಾಂಕ,

ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳು ಬಿತ್ತನೆ ಕುರಿತು ಬೀಜಗಳನ್ನು ಪೂರೈಕೆ ಪ್ರಸ್ತಾವನೆಗೆ ಕಳಿಸಿಕೊಡಲಾಗಿದೆ.

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಈಗಾಗಲೇ ಸೂಚಿಸಲಾಗಿದೆ. ಮಾರಾಟ ದರ ಪಟ್ಟಿ ಹಾಕಿ ಕೋವಿಡ್ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹೇಳಲಾಗಿದೆ.

ಈ ನಡುವೆ ಮಸ್ಕಿ ಕ್ಷೇತ್ರದ ಅಂತರಗಂಗೆ, ಮೆದಿಕಿನಾಳ, ಅಂಕುಶದೊಡ್ಡಿ, ತಲೆಕಾನ್ , ಗುಡದೂರು, ಹಂಪನಾಳ, ನಾಗರಬೆಂಚಿ ಸುತ್ತಮುತ್ತಲಿನ ಗ್ರಾಮಸ್ಥರು ಮುಂಗಾರು ಬಿತ್ತನೆಗಾಗಿ ಭರ್ಜರಿ ಹೊಲಗಳ ಹದ ಮಾಡಿ ಕೆಲಸ ಮಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು