1:20 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಮುಂಗಾರು ಪ್ರಾರಂಭದ ಮುನ್ನವೇ ಕೆರೆಗಳ ಸುಸ್ಥಿತಿ ಪರಿಶೀಲನೆ ನಡೆಸಲಾಗುತ್ತದೆ: ಸಚಿವ ಭೋಸರಾಜು

12/12/2024, 22:31

ಬೆಳಗಾವಿ (reporterkarnataka.com): ಕೆರೆಗಳ ಏರಿಗಳ ಸಂರಕ್ಷಣೆಗಾಗಿ ಸರ್ಕಾರವು ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಪರಿಷತ್ತಿನಲ್ಲಿ ವಿವರಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಪ್ರಾರಂಭವಾಗುವ ಮುಂಚೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕೆರೆಗಳ ಪರಿವೀಕ್ಷಣೆ ಕೈಗೊಂಡು, ಕೆರೆಗಳ ಏರಿ, ಕೋಡಿ, ತೂಬು ಸೇರಿದಂತೆ ಇತ್ಯಾದಿಗಳನ್ನು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಂಡು ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ ಎಂದರು.
ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3778 ಕೆರೆಗಳಿದ್ದು, ಅತೀ ಮಳೆಯಿಂದ ಕೆರೆಗಳ ಏರಿ ಹಾನಿಯಾದ ಸಂದರ್ಭದಲ್ಲಿ ತುರ್ತು ಸಂರಕ್ಷಣೆಗೆ ಕ್ರಮ ಜರುಗಿಸಲಾಗಿದೆ ಎಂದು ವಿವರಿಸಿದರು.

2023-24ನೇ ಸಾಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 210 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 29.12 ಕೋಟಿ ರೂ. ವೆಚ್ಚ ಮಾಡಲಾಗಿದೆ. 2022-23 ರಲ್ಲಿ 638 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 156 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು