8:16 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮುಂಗಾರು ಮುಗಿಯುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ!: ಬರದ ಕರಿಛಾಯೆಯಲ್ಲಿ ಜನರ ಬದುಕು!!

04/09/2023, 10:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪ್ರಸಕ್ತ ಸಾಲಿನ ಮುಂಗಾರು ಮುಗಿಯುವ ಮುನ್ನವೇ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ. ರಾಜ್ಯಾದ್ಯಂತ ಈ ಬಾರಿ ಮಳೆ ಪ್ರಮಾಣ ತೀರಾ ಇಳಿಮುಖವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಹೇಳಿ ತೀರದು.


ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರದ ಪರಿಸ್ಥಿತಿ ಏರ್ಪಟ್ಟಿದ್ದು ಸಕಾಲಕ್ಕೆ ಮಳೆಯಾಗದ ಕಾರಣ ಬರದ ಛಾಯೆ ಆವರಿಸಿದೆ. ತಾಲೂಕಿನ ಅಡಹಳ್ಳಿ,ಕೋಹಳ್ಳಿ,ಕಕಮರಿ,ಐಗಳಿ ಸೇರಿದಂತೆ ಕೊಟ್ಟಲಗಿ ಭಾಗದಲ್ಲಿ ಕುಡಿಯುವ ನೀರಿಗೆ ಜನರು ಪರದಾಡುವ ಪರಿಸ್ಥಿತಿ ಎದುರಾಗಿದ್ದು ಕಿಲೋ ಮೀಟರಗಟ್ಟಲೆ ಸಂಚರಿಸಿ ಕುಡಿಯುವ ನೀರು ತರಬೇಕಾಗಿದ್ದು ಮಹಿಳೆಯರು,ಪುರುಷರು ನಿತ್ಯದ ದುಡಿಮೆ ನಿಲ್ಲಿಸಿ ನೀರಿಗಾಗಿ ಅಲೆಯುವಂತಾಗಿದೆ.
ರಾಜ್ಯದ ಜನರಿಗೆ ವಿವಿಧ ಭಾಗ್ಯಗಳನ್ನು ಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ಅಥಣಿ ತಾಲೂಕಿನ ಕೆಲವು ಗ್ರಾಮಗಳನ್ನು ಬರಪೀಡಿತ ಗ್ರಾಮಗಳೆಂದು ಘೋಷಿಸಿ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಕೊಡುವ ಮೂಲಕ ಸ್ಪಂದಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು